ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಗಂಭೀರ್‌ ವಿರುದ್ಧ ಎಫ್‌ಐಆರ್‌ ದಾಖಲು

Last Updated 11 ಮೇ 2019, 11:22 IST
ಅಕ್ಷರ ಗಾತ್ರ

ನವದೆಹಲಿ: ಅನುಮತಿ ಪಡೆಯದೆ ಚುನಾವಣಾ ರ‍್ಯಾಲಿ ನಡೆಸಿನೀತಿ ಸಂಹಿತೆಉಲ್ಲಂಘನೆ ಮಾಡಿದ್ದಾರೆ ಎಂದುಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಪ್ರಕರಣ ಸಂಬಂಧ ಗಂಭೀರ್‌ ವಿರುದ್ಧ ದೂರು ದಾಖಲಿಸುವಂತೆ ಚುನಾವಣಾ ಆಯೋಗ ಪೂರ್ವ ದೆಹಲಿಯ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಕ್ರಿಕೆಟ್‌ ರಂಗದಲ್ಲಿ ಹೆಸರು ಮಾಡಿದ್ದ ಗೌತಮ್‌ ಗಂಭೀರ್‌ ಅವರು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದರು. ಸದ್ಯ ಪೂರ್ವ ದೆಹಲಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

‘ಎರಡು ಕಡೆಗುರುತಿನ ಚೀಟಿ’
ಗಂಭೀರ್‌, ಕರೋಲ್‌ ಬಾಗ್‌ ಹಾಗೂ ರಾಜಿಂದರ್‌ ನಗರದಲ್ಲಿ ಎರಡು ಕಡೆ ಮತದಾನದ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅತಿಶಿ ಅವರು ಈಗಾಗಲೇ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

‘ನಿಮಗೆ ನಿಯಮಗಳೇ ಗೊತ್ತಿಲ್ಲವೆ’

ಎಫ್ಐಆರ್‌ ದಾಖಲಾದ ಬಳಿಕಅತಿಶಿ ಮತ್ತೊಂದು ಟ್ವೀಟ್​ ಮಾಡಿದ್ದು, ‘ಮೊದಲು ನಾಮಪತ್ರ ಸಲ್ಲಿಸುವುದರಲ್ಲಿ ಎಡವಿದ್ದೀರಿ, ನಂತರ ಎರಡು ಕಡೆಮತದಾನದ ಗುರುತಿನ ಚೀಟಿ ಹೊಂದುವ ಮೂಲಕ ಕ್ರಿಮಿನಲ್​ ಅಪರಾಧ ಮಾಡಿದ್ದೀರಿ, ಈಗ ರ‍್ಯಾಲಿ ನಡೆಸಲು ಅನುಮತಿ ಪಡೆಯದೆ ಎಫ್ಐಆರ್​ ದಾಖಲಾಗಿದೆ. ನಿಮಗೆ ನಿಯಮಗಳೇ ಗೊತ್ತಿಲ್ಲದಿರುವಾಗ ಯಾಕೆ ಆಟ ಆಡುತ್ತೀರಿ’ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT