ನವದೆಹಲಿ: ದೇಶದಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆಯಾದರೂ, ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್–19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಿಸಿದ ಒಂದು ವಾರದ ಬಳಿಕ ದೆಹಲಿ ಮತ್ತು ಗಾಜಿಯಾಬಾದ್ ಗಡಿಯನ್ನು ಮುಚ್ಚಲಾಗಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲಾಧಿಕಾರಿ ಅಜಯ್ ಶಂಕರ್ ಪಾಂಡೆ ಸೋಮವಾರ ಈ ಆದೇಶ ಹೊರಡಿಸಿದ್ದಾರೆ.
ಅಗತ್ಯ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿರುವ ಹಾಗೂ ಮಾನ್ಯ ಪಾಸ್ ಹೊಂದಿರುವವರಿಗೆ ಮಾತ್ರವೇ ಗಾಜಿಯಾಬಾದ್–ದೆಹಲಿ ಪ್ರಯಾಣಿಸಲು ಅವಕಾಶವಿದೆ. ಭಾರಿ ವಾಹನಗಳು, ಸರಕು ಸಾಗಾಣೆವಾಹನಗಳು, ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಮತ್ತು ಇತರ ಅಗತ್ಯ ಸೇವೆಗಳಿಗೆ ಬಳಸುವ ವಾಹನಗಳಿಗೆ ಪಾಸ್ ಇಲ್ಲದೆ ಗಡಿ ದಾಟಲು ಅವಕಾಶ ನಿರ್ಬಂಧಿಸಲಾಗಿದೆ.
ಗಾಜಿಯಾಬಾದ್ನಲ್ಲಿ ಇದುವರೆಗೆ ಒಟ್ಟು 227 ಕೊರೊನಾವೈರಸ್ ಪ್ರಕರಣಗಳು ವರದಿಯಾಗಿದ್ದು, ಇನ್ನೂ 33 ಪ್ರಕರಣಗಳು ಸಕ್ರಿಯವಾಗಿವೆ. ಉತ್ತರ ಪ್ರದೇಶದ ಮತ್ತು ದೆಹಲಿಯ ಗಡಿ ಜಿಲ್ಲೆಯಾಗಿರುವ ಗಾಜಿಯಾಬಾದ್ನಲ್ಲಿ ಏಪ್ರಿಲ್ನಲ್ಲಿ ಹೆಚ್ಚು ಪ್ರಕರಣಗಳು ವರದಿಯಾದಾಗಲೂ ಗಡಿಯಲ್ಲಿ ಸಂಚಾರ ನಿರ್ಬಂಧಿಸಲಾಗಿತ್ತು.
Delhi-Ghaziabad border to be sealed like it was done during lockdown 2, till further orders: Ghaziabad Dist Admn
Those providing essential services, including media personnel, don't need pass, IDs sufficient. Ambulances and vehicles for essential services will also be allowed. pic.twitter.com/caSGJVuyUk
ದೆಹಲಿಯಲ್ಲಿ ಇದುವರೆಗೆ 13,418 ಕೋವಿಡ್–19 ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 6,540 ಸೋಂಕಿತರು ಗುಣಮುಖರಾಗಿದ್ದು, 261 ಮಂದಿ ಮೃತಪಟ್ಟಿದ್ದಾರೆ. ಉಳಿದ 6,617 ಜನರಿಗೆ ಚಿಕಿತ್ಸೆ ಮುಂದುವರಿದಿದೆ.