‘ಗೋವಾ ರಾಜ್ಯದ ನಾಯಕತ್ವ ಕುರಿತು ಶನಿವಾರ ಎಂಜಿಪಿ ಕೇಂದ್ರೀಯ ಸಮಿತಿ ವಿವರವಾಗಿ ಚರ್ಚೆ ನಡೆಸಿತು. ಎಂಟು ತಿಂಗಳಿನಿಂದ ರಾಜ್ಯದಲ್ಲಿ ಆಡಳಿತ ಕುಸಿದಿದೆ. ಆಡಳಿತವನ್ನು ಸುವ್ಯವಸ್ಥಿತವಾಗಿ ನಡೆಸಲು ನಮಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದೇವೆ’ ಎಂದು ಪಕ್ಷದ ಅಧ್ಯಕ್ಷ ದೀಪಕ್ ಧವಳಿಕರ್ ಹೇಳಿದ್ದಾರೆ. ‘ನಮ್ಮ ಎಚ್ಚರಿಕೆಯನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಳ್ಳಬೇಕು. ಶಿರೋಡ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನೇ ಸ್ಪರ್ಧಿಸಲಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.