ತಿರುವನಂತಪುರ: ಮುಟ್ಟಾಗುವ ವಯಸ್ಸಿನ ಮಹಿಳೆಯರಿಗೂ ದೇಗುಲ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂಬ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪ್ರತಿಭಟನೆಗಳಿಗೆ ಸಾಕ್ಷಿಯಾದ ಶಬರಿಮಲೆಯ ಸ್ವಾಮಿ ಅಯ್ಯಪ್ಪ ದೇವಸ್ಥಾನವನ್ನು ಭಾನುವಾರ ಮುಚ್ಚಲಾಯಿತು. ಅಯ್ಯಪ್ಪ ವ್ರತಧಾರಿಗಳಿಂದ ಕಳೆದ ಎರಡು ತಿಂಗಳು ಕಾಲ ವಿವಿಧ ಪೂಜೆ–ಪುನಸ್ಕಾರ, ಧಾರ್ಮಿಕ ವಿಧಿಗಳು ನೆರವೇರಿದ ನಂತರ ಭಾನುವಾರ ವಿಧ್ಯುಕ್ತವಾಗಿ ದೇವಸ್ಥಾನವನ್ನು ಬಂದ್ ಮಾಡಲಾಯಿತು.