‘ಪೊಲೀಸರು ವಿವೇಚನಾರಹಿತರಾಗಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ, ಗಾಯಗೊಂಡವರಿಗೆ ವೈದ್ಯಕೀಯ ನೆರವೂ ಲಭಿಸಲಿಲ್ಲ’ ಎಂದು ಅರ್ಜಿದಾರರು ಆರೋಪಿಸಿದ್ದರು. ಆದರೆ ಈ ಆರೋಪಗಳನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಳ್ಳಿಹಾಕಿ, ‘ಅಲೀಗಡ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಮಾತ್ರ ಗಾಯಗೊಂಡಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗಿದೆ. ಅದೂ ಅಲ್ಲದೆ ಅರ್ಜಿದಾರರು ಆರೋಪಿಸಿರುವಂತೆ ಅವರು ಪೊಲೀಸರ ಜೊತೆಗಿನ ಸಂಘರ್ಷದಲ್ಲಿ ಗಾಯಗೊಂಡಿರಲಿಲ್ಲ’ ಎಂದರು.