ಬೆಂಗಳೂರು:ಗೋವಾ ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವಮನೋಹರ್ ಪರ್ರೀಕರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ,ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ:ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ನಿಧನ
‘ಶ್ರೀ ಮನೋಹರ್ ಪರ್ರೀಕರ್ ಒಬ್ಬ ಸಾಟಿಯಿಲ್ಲದ ನಾಯಕ. ನಿಜವಾದ ದೇಶಭಕ್ತ ಮತ್ತು ಅಸಾಧಾರಣ ಆಡಳಿತಗಾರ. ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ದೇಶಕ್ಕೆ ಅವರು ಸಲ್ಲಿಸಿದ ಕಳಂಕರಹಿತ ಸೇವೆ ತಲೆಮಾರುಗಳವರೆಗೆ ನೆನಪಿನಲ್ಲುಳಿಯಲಿದೆ. ಅವರ ನಿಧನದಿಂದ ಅತೀವ ದುಃಖವಾಗಿದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Shri Manohar Parrikar was an unparalleled leader.
— Chowkidar Narendra Modi (@narendramodi) March 17, 2019
A true patriot and exceptional administrator, he was admired by all. His impeccable service to the nation will be remembered by generations.
Deeply saddened by his demise. Condolences to his family and supporters.
Om Shanti. pic.twitter.com/uahXme3ifp
‘ಗೋವಾಮುಖ್ಯಮಂತ್ರಿಮನೋಹರ್ ಪರ್ರೀಕರ್ ನಿಧನದ ಸುದ್ದಿ ಕೇಳಿ ಬಹಳ ಬೇಸರವಾಗಿದೆ. ರಾಜಕೀಯದ ಗಡಿ ಮೀರಿಅವರನ್ನು ಎಲ್ಲರೂ ಗೌರವಿಸುತ್ತಿದ್ದರು. ಅವರ ಆತ್ಮಕ್ಕೆ ಶಾಂತಿ ದೊರೆಯಲಿ’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
Extremely saddened to hear of the passing away of the Chief Minister of Goa Shri #ManoharParrikar.
— H D Kumaraswamy (@hd_kumaraswamy) March 17, 2019
He was respected by all across political lines.
My heartfelt condolences to his family, friends and loved ones. May his soul rest in peace.
‘ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಅವರ ನಿಧನದ ಸುದ್ದಿ ಆಘಾತ ನೀಡಿದೆ. ಮೃತರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ನಿಧನದ ಸುದ್ದಿ ಆಘಾತ ನೀಡಿದೆ. ಮೃತರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. #ManoharParrikar pic.twitter.com/h5ou0ZDg8w
— Siddaramaiah (@siddaramaiah) March 17, 2019
‘ಹಿರಿಯ ಬಿಜೆಪಿ ನಾಯಕ,ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಸಾರ್ವಜನಿಕ ಜೀವನದಲ್ಲಿ ಅವರು ಸದಾ ಮಾದರಿಯಾಗಿದ್ದರು ಮತ್ತು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ನಾವೆಲ್ಲ ಅವರನ್ನು ಮಿಸ್ ಮಾಡಿಕೊಳ್ಳಲಿದ್ದೇವೆ. ಅವರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ. ಓಂ ಶಾಂತಿ’ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಟ್ವೀಟ್ ಮಾಡಿದ್ದಾರೆ.
Saddened to know about the demise of senior BJP leader Shri Manohar Parrikar ji, Chief Minister of Goa. He always led by example in his public life & was loved by masses. He will be missed by everyone of us. May God render peace to the departed soul. Om Shanti ॐ शान्ति
— Chowkidar Arun Jaitley (@arunjaitley) March 17, 2019
ಇದನ್ನೂ ಓದಿ: ಮನೋಹರ್ ಪರ್ರೀಕರ್ ಬದುಕಿನ ಹಾದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.