ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾದಾಯಿ ವಿಚಾರದಲ್ಲಿ ರಾಜಿ ಇಲ್ಲ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Last Updated 25 ಸೆಪ್ಟೆಂಬರ್ 2019, 10:27 IST
ಅಕ್ಷರ ಗಾತ್ರ

ಪಣಜಿ: ಮಹಾದಾಯಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಬುಧವಾರ ಸ್ಪಷ್ಟಪಡಿಸಿದ್ದಾರೆ.

‘ಮಹದಾಯಿ ಬಗ್ಗೆ ಸರ್ಕಾರಕ್ಕೆ ಬದ್ಧತೆಯಿದೆ. ಆದರೆ ಗೋವಾ ಜನರು ಮನೆಯ ತ್ಯಾಜ್ಯಗಳನ್ನು ತಂದು ನದಿಗಳಿಗೆ ಸುರಿದು, ಅವುಗಳ ನಾಶಕ್ಕೆ ಕಾರಣರಾಗುತ್ತಿದ್ದಾರೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಮಹಾದಾಯಿ ರೀತಿಯಲ್ಲೇ ರಾಜ್ಯದ ಇತರ ನದಿಗಳ ಸಂರಕ್ಷಣೆಯೂ ನಮ್ಮ ಹೊಣೆ’ ಎಂದರು.

ಕರ್ನಾಟಕ ಹಾಗೂ ಗೋವಾ ಮುಖ್ಯಮಂತ್ರಿಗಳು ನ್ಯಾಯಾಲಯದ ಹೊರಗೆ ಮಹಾದಾಯಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕೆಲ ವಾರಗಳ ಹಿಂದ ಸಲಹೆ ನೀಡಿದ್ದರು. ಆದರೆ ಯಡಿಯೂರಪ್ಪ ಅವರ ಭೇಟಿಗೆ ಸಾವಂತ್ ನಿರಾಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT