ಪಣಜಿ: ಕಳಸಾ– ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಹೊಸ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ಗೋವಾ ಸರ್ಕಾರ ವಿರೋಧಿಸಿದೆ.
ಈ ಕುರಿತು ಮಹದಾಯಿ ಜಲವಿವಾದ ನ್ಯಾಯಮಂಡಳಿಗೆ ಗೋವಾ ಸರ್ಕಾರ ಆಕ್ಷೇಪ ಸಲ್ಲಿಸಿದೆ.
‘ಯೋಜನೆಗೆ ಸಂಬಂಧಿಸಿದಂತೆ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಗೋವಾ ಸರ್ಕಾರ ಕಳವಳ ಹೊಂದಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದರು. ‘ಅವರು (ಕರ್ನಾಟಕ) ಹೊಸ ಡಿಪಿಆರ್ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ನಮಗಿದೆ. ಈ ಬಗ್ಗೆ ಕಳವಳವಿದೆ, ಆದರೆ ನಾವು ಇದರ ಕುರಿತು ನಿಗಾ ವಹಿಸಿದ್ದೇವೆ ಹಾಗೂಕೇಂದ್ರ ಸರ್ಕಾರದ ಸಂಪರ್ಕದಲ್ಲಿದ್ದೇವೆ’ ಎಂದರು.
‘ಕೋವಿಡ್–19 ಪಿಡುಗಿನ ಪರಿಸ್ಥಿತಿ ನಡುವೆಯೂಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ಗಮನವಿರಿಸಿದೆ. ಈ ವಿವಾದದ ಕುರಿತು ನಾವು ಗಂಭೀರವಾಗಿದ್ದೇವೆ. ಅಡ್ವೊಕೇಟ್ ಜನರಲ್ ಹಾಗೂ ಕಾನೂನು ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಈಗಾಗಲೇ ಆಕ್ಷೇಪವನ್ನೂ ಸಲ್ಲಿಸಿದ್ದೇವೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.