<p><strong>ಪಣಜಿ:</strong> ಕಳಸಾ– ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಹೊಸ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ಗೋವಾ ಸರ್ಕಾರ ವಿರೋಧಿಸಿದೆ.</p>.<p>ಈ ಕುರಿತು ಮಹದಾಯಿ ಜಲವಿವಾದ ನ್ಯಾಯಮಂಡಳಿಗೆ ಗೋವಾ ಸರ್ಕಾರ ಆಕ್ಷೇಪ ಸಲ್ಲಿಸಿದೆ. </p>.<p>‘ಯೋಜನೆಗೆ ಸಂಬಂಧಿಸಿದಂತೆ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಗೋವಾ ಸರ್ಕಾರ ಕಳವಳ ಹೊಂದಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದರು. ‘ಅವರು (ಕರ್ನಾಟಕ) ಹೊಸ ಡಿಪಿಆರ್ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ನಮಗಿದೆ. ಈ ಬಗ್ಗೆ ಕಳವಳವಿದೆ, ಆದರೆ ನಾವು ಇದರ ಕುರಿತು ನಿಗಾ ವಹಿಸಿದ್ದೇವೆ ಹಾಗೂಕೇಂದ್ರ ಸರ್ಕಾರದ ಸಂಪರ್ಕದಲ್ಲಿದ್ದೇವೆ’ ಎಂದರು.</p>.<p>‘ಕೋವಿಡ್–19 ಪಿಡುಗಿನ ಪರಿಸ್ಥಿತಿ ನಡುವೆಯೂಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ಗಮನವಿರಿಸಿದೆ. ಈ ವಿವಾದದ ಕುರಿತು ನಾವು ಗಂಭೀರವಾಗಿದ್ದೇವೆ. ಅಡ್ವೊಕೇಟ್ ಜನರಲ್ ಹಾಗೂ ಕಾನೂನು ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಈಗಾಗಲೇ ಆಕ್ಷೇಪವನ್ನೂ ಸಲ್ಲಿಸಿದ್ದೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ:</strong> ಕಳಸಾ– ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಹೊಸ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ಗೋವಾ ಸರ್ಕಾರ ವಿರೋಧಿಸಿದೆ.</p>.<p>ಈ ಕುರಿತು ಮಹದಾಯಿ ಜಲವಿವಾದ ನ್ಯಾಯಮಂಡಳಿಗೆ ಗೋವಾ ಸರ್ಕಾರ ಆಕ್ಷೇಪ ಸಲ್ಲಿಸಿದೆ. </p>.<p>‘ಯೋಜನೆಗೆ ಸಂಬಂಧಿಸಿದಂತೆ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಗೋವಾ ಸರ್ಕಾರ ಕಳವಳ ಹೊಂದಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದರು. ‘ಅವರು (ಕರ್ನಾಟಕ) ಹೊಸ ಡಿಪಿಆರ್ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ನಮಗಿದೆ. ಈ ಬಗ್ಗೆ ಕಳವಳವಿದೆ, ಆದರೆ ನಾವು ಇದರ ಕುರಿತು ನಿಗಾ ವಹಿಸಿದ್ದೇವೆ ಹಾಗೂಕೇಂದ್ರ ಸರ್ಕಾರದ ಸಂಪರ್ಕದಲ್ಲಿದ್ದೇವೆ’ ಎಂದರು.</p>.<p>‘ಕೋವಿಡ್–19 ಪಿಡುಗಿನ ಪರಿಸ್ಥಿತಿ ನಡುವೆಯೂಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ಗಮನವಿರಿಸಿದೆ. ಈ ವಿವಾದದ ಕುರಿತು ನಾವು ಗಂಭೀರವಾಗಿದ್ದೇವೆ. ಅಡ್ವೊಕೇಟ್ ಜನರಲ್ ಹಾಗೂ ಕಾನೂನು ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಈಗಾಗಲೇ ಆಕ್ಷೇಪವನ್ನೂ ಸಲ್ಲಿಸಿದ್ದೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>