ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೆಸ್ಕಾಂನಲ್ಲಿ ಕರ್ತವ್ಯದಲ್ಲಿದ್ದಾಗಲೇ ನನ್ನ ತಮ್ಮ ಶಶಿಧರ ಸುವರ್ಣ ಮೃತಪಟ್ಟಿದ್ದ. ಹೀಗಾಗಿ, ಅನುಕಂಪ ಆಧಾರದ ಮೇಲೆ ಕೆಲಸ ನೀಡುವಂತೆ ಅರ್ಜಿ ಸಲ್ಲಿಸಿದ್ದೆ. ‘ಮೃತನ ಅವಿವಾಹಿತ ತಮ್ಮ ಅಥವಾ ತಂಗಿಗೆ ಮಾತ್ರ ಕೆಲಸ ನೀಡಲು ಕಾನೂನಿನಲ್ಲಿ ಅವಕಾಶವಿದೆ’ ಎಂದು ಹೇಳಿ ಕೆಲಸ ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ’ ಎಂದರು.