ಅವರಲ್ಲಿ ಹಲವರು ಟ್ರಕ್ವೊಂದರಲ್ಲಿ ಸಾಗಿಸುತ್ತಿದ್ದ ಸರಕು ಚೀಲಗಳ ಮೇಲೆ ಕುಳಿತಿದ್ದರು. ಡಿಕ್ಕಿಯ ರಭಸಕ್ಕೆ ಅವರಲ್ಲಿ ಕೆಲವರು ವಾಹನದಿಂದ ಕೆಳಗೆ ಬಿದ್ದರೆ, ಮತ್ತೆ ಕೆಲವರು ಘರ್ಷಣೆಯಿಂದಾಗಿ ಚೀಲಗಳ ಕೆಳಗೆ ಸಿಲುಕಿಕೊಂಡಿದ್ದರು. ವಲಸಿಗರನ್ನು ಬಂಗಾಳ, ಜಾರ್ಖಂಡ್, ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿರುವ ಅವರ ಮನೆಗಳಿಗೆ ಕರೆದೊಯ್ಯಲಾಗುತ್ತಿತ್ತು.