ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದಿಂದ ಕೋವಿಡ್‌–19 'ವಿಪತ್ತು' ಅಧಿಸೂಚನೆ: ₹4 ಲಕ್ಷ ಪರಿಹಾರ ಘೋಷಣೆ

Last Updated 14 ಮಾರ್ಚ್ 2020, 12:35 IST
ಅಕ್ಷರ ಗಾತ್ರ

ನವದೆಹಲಿ:ಕೇಂದ್ರ ಸರ್ಕಾರ 'ಕೋವಿಡ್‌–19' ರೋಗವನ್ನು ಅಧಿಸೂಚಿತ ವಿಪತ್ತು ಎಂದು ಪರಿಗಣಿಸಲಿದ್ದು, ರಾಜ್ಯ ವಿಪತ್ತು ಪರಿಹಾರನಿಧಿ (ಎಸ್‌ಡಿಆರ್‌ಎಫ್‌) ಅಡಿಯಲ್ಲಿ ಸಹಕಾರ ನೀಡಲಿದೆ. ಹಾಗೂ ಕೊರೊನಾ ವೈರಸ್‌ ಸೋಂಕಿನಿಂದಾಗಿ ಮೃತಪಟ್ಟಿರುವ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲಿದೆ.

ಎಸ್‌ಡಿಆರ್‌ಎಫ್‌ ಅಡಿಯಲ್ಲಿ ಸಹಕಾರ ನೀಡಲು ಉದ್ದೇಶಿಸಿರುವ ಕೇಂದ್ರ ಗೃಹ ಸಚಿವಾಲಯ, ಕೋವಿಡ್–19ನ್ನು ಅಧಿಸೂಚಿತ ವಿಪತ್ತು ಎಂದು ಪರಿಗಣಿಸಿ ₹4 ಲಕ್ಷ ಪರಿಹಾರ ನೀಡಲು ನಿರ್ಧರಿಸಿದೆ. ಈ ಕುರಿತು ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ರವಾನಿಸಿದೆ.

ಕೋವಿಡ್‌–19ಗೆ ತುತ್ತಾದವರು, ಕೊರೊನಾ ವೈರಸ್‌ ಸೋಂಕು ಹರಡದಂತೆ ತಡೆಯುವ ಹಾಗೂ ಕೋವಿಡ್‌–19 ದೃಢಪಟ್ಟವರ ಚಿಕಿತ್ಸೆ ಕಾರ್ಯಗಳಲ್ಲಿ ಭಾಗಿಯಾಗುವವರೂ ಸೋಂಕಿಗೆ ಒಳಗಾಗಿ ಸಾವಿಗೀಡಾದರೆ ಅವರ ಕುಟುಂಬಗಳಿಗೂ ಸರ್ಕಾರದಿಂದ 4 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ.

ಕೊರೊನಾ ವೈರಸ್‌ ಸೋಂಕಿನಿಂದಾಗಿ ಭಾರತದಲ್ಲಿ ಇಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ ಹಾಗೂ 80ಕ್ಕೂ ಹೆಚ್ಚು ಜನರಿಗೆ ಸೋಂಕು ಹರಡಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿವೆ. ಶಾಪಿಂಗ್‌ ಮಾಲ್‌ಗಳು, ಚಿತ್ರಮಂದಿರಗಳ ಕಾರ್ಯಾಚರಣೆಗೂ ನಿರ್ಬಂಧ ಹೇರಲಾಗಿದೆ.

ಕೋವಿಡ್‌–19 ಸಾಂಕ್ರಾಮಿಕ ರೋಗ ಎಂದುವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT