ಲೋಕಸಭೆಯಲ್ಲಿಮಂಗಳವಾರವೂ ದೆಹಲಿ ಹಿಂಸಾಚಾರದ ವಿಷಯದ ಬಗ್ಗೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದ ನಡೆದಿದೆ. ದೆಹಲಿ ಗಲಭೆಯಲ್ಲಿ 46 ಮಂದಿ ಸಾವಿಗೀಡಾಗಿದ್ದಾರೆ, 200ಕ್ಕಿಂತಲೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಲೋಕಸಭೆಯಲ್ಲಿ ಚರ್ಚೆಯಾಗಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದಿದ್ದು, ಸ್ಪೀಕರ್ಓಂ ಬಿರ್ಲಾ ಕಲಾಪ ಮುಂದೂಡಿದ್ದಾರೆ.