ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿಬಿಜೆಪಿಯ 106 ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಕಾಂಗ್ರೆಸ್ ಪಕ್ಷದ 22 ಶಾಸಕರು ರಾಜಿನಾಮೆ ನೀಡಿದ್ದು ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಶೀಘ್ರದಲ್ಲಿ ವಿಶ್ವಾಸಮತಯಾಚನೆ ಆಗದಿದ್ದರೆ ಕುದುರೆ ವ್ಯಾಪಾರ ನಡೆಯುವ ಸಾಧ್ಯತೆಗಳಿವೆ ಎಂದು ರಾಜ್ಯಪಾಲರಗೆ ಮನವಿ ಮಾಡಿದ್ದರು.