ವಿಮಾನ ಟಿಕೆಟ್ ರದ್ದತಿ ಶುಲ್ಕ ಮನ್ನಾ:ಅಮರನಾಥ ಯಾತ್ರಿಕರು ಮತ್ತು ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರದಿಂದ ಆದಷ್ಟು ಬೇಗನೆ ಹೊರ ಹೋಗಬೇಕು ಎಂದು ಅಲ್ಲಿನ ಸರ್ಕಾರ ಸೂಚನೆ ನೀಡಿದೆ. ಹೀಗಾಗಿ ಯಾತ್ರೆಗೆ ತೆರಳಲು ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಟಿಕೆಟ್ ರದ್ದತಿ ಮತ್ತು ಪ್ರಯಾಣದ ದಿನಾಂಕ ಬದಲಾವಣೆ ಮಾಡುವುದಕ್ಕೆ ಸಂಬಂಧಿಸಿದ ಶುಲ್ಕವನ್ನು ಪೂರ್ಣ ಮನ್ನಾ ಮಾಡಲು ವಿಮಾನಯಾನ ಸಂಸ್ಥೆಗಳು ನಿರ್ಧರಿಸಿವೆ. ಏರ್ ಇಂಡಿಯಾ, ಗೋ ಏರ್, ಇಂಡಿಗೊ, ವಿಸ್ತಾರ ವಿಮಾನಯಾನ ಸಂಸ್ಥೆಗಳುಶುಲ್ಕ ಮನ್ನಾ ಘೋಷಿಸಿವೆ. ಏರ್ ಇಂಡಿಯಾದ ಶುಲ್ಕ ರದ್ದತಿ ಆಗಸ್ಟ್ 15ರವರೆಗೆ ಇರಲಿದ್ದು, ವಿಸ್ತಾರ ಮತ್ತು ಇಂಡಿಗೊದ ಶುಲ್ಕ ರದ್ದತಿ ಅವಧಿ ಆಗಸ್ಟ್ 9ಕ್ಕೆ ಕೊನೆಗೊಳ್ಳಲಿದೆ.