ನವದೆಹಲಿ:‘ಭಾರತದಲ್ಲಿ ವಾಟ್ಸ್ಆ್ಯಪ್ನ ಯಾವುದೇ ಬಳೆಕದಾರರ ಮೇಲೆ, ಸರ್ಕಾರದ ಯಾವ ಸಂಸ್ಥೆಗಳೂ ಅನಧಿಕೃತವಾಗಿ ಬೇಹುಗಾರಿಕೆ ನಡೆಸಿಲ್ಲ’ಎಂದುಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ. ಆದರೆ, ‘ಭಾರತ ಸರ್ಕಾರದ ಯಾವುದಾದರೂ ಸಂಸ್ಥೆ ಪೆಗಾಸಸ್ ಬೇಹುಗಾರಿಕೆ ತಂತ್ರಾಂಶವನ್ನು ಖರೀದಿಸಿದೆಯೇ’ ಎಂದು ಕಾಂಗ್ರೆಸ್ ಕೇಳಿದ ಪ್ರಶ್ನೆಗೆ ಅವರು ಉತ್ತರ ನೀಡಿಲ್ಲ.