‘ಮೂಲಸೌಲಭ್ಯ, ಸಾಮಾಜಿಕ ನ್ಯಾಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಚಾರಿತ್ರಿಕ ಹೆಜ್ಜೆಗಳನ್ನಿಟ್ಟಿದೆ. ರಸ್ತೆ ನಿರ್ಮಾಣ, ರೈಲ್ವೆ ಕಾಮಗಾರಿಗಳು, ಬಂದರು, ವಿಮಾನ ನಿಲ್ದಾಣ ನಿರ್ಮಾಣದಂಥ ಯೋಜನೆಗಳಿಗಾಗಿ ₹ 100 ಲಕ್ಷ ಕೋಟಿ ಹೂಡಿಕೆ ಮಾಡುವುದು, 2024ರ ವೇಳೆಗೆ ಪ್ರತಿ ಮನೆಗೆ ನೀರಿನ ಸಂಪರ್ಕ ಒದಗಿಸುವ ಗುರಿ ಇಟ್ಟುಕೊಂಡು ‘ಜಲಶಕ್ತಿ’ ಸಚಿವಾಲಯ ರಚನೆ ಮುಂತಾದ ಯೋಜನೆಗಳ ಅನುಷ್ಠಾನದ ಮೂಲಕ ನಾವು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಟ್ಟಿದ್ದೇವೆ. ಜಾಗತಿಕ ವೇದಿಕೆಗಳಲ್ಲಿ ಪ್ರಧಾನಿ ಮೋದಿ ಅವರ ಉಪಸ್ಥಿತಿಯು ವಿಶ್ವ ಮಟ್ಟದ ರಾಜಕೀಯದಲ್ಲಿ ಭಾರತದ ಪ್ರಭಾವ ಹೆಚ್ಚುವಂತೆ ಮಾಡಿದೆ’ ಎಂದರು.