ಜಾರಿಗೆ ಬಾರದ ನಿರ್ದೇಶನ:ಗೋರಕ್ಷಣೆ ಹೆಸರಿನಲ್ಲಿ ನಡೆಯುವ ಹಿಂಸಾಚಾರದ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಳೆದ ಸೆಪ್ಟೆಂಬರ್ 6ರಂದು ಸುಪ್ರೀಂ ಕೋರ್ಟ್ ಪೀಠವು ಸೂಚನೆಗಳನ್ನು ನೀಡಿತ್ತು. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ನೋಡಲ್ ಅಧಿಕಾರಿಯನ್ನಾಗಿ ಒಂದು ವಾರದೊಳಗೆ ನೇಮಿಸಬೇಕು. ಗುಂಪು ಹಿಂಸೆ ತಡೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿತ್ತು.