<p><strong>ನವದೆಹಲಿ:</strong> ರಾಷ್ಟ್ರೀಯ ಪಿಂಚಣಿ ಯೋಜನೆಗೆ (ಎನ್ಪಿಎಸ್) ಕೇಂದ್ರ ಸರ್ಕಾರದ ಪಾಲನ್ನು ನೌಕರರ ಮೂಲ ವೇತನದ ಶೇ 14ರಷ್ಟಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೊದಲು ಇದು ಶೇ 10ರಷ್ಟಿತ್ತು ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸೋಮವಾರ ಹೇಳಿದ್ದಾರೆ.</p>.<p>ಈ ನಿರ್ಧಾರದಿಂದ 2019–2020ನೇ ವರ್ಷದಲ್ಲಿ ಸರ್ಕಾರಕ್ಕೆ ₹2,840 ಕೋಟಿ ಹೆಚ್ಚುವರಿ ವೆಚ್ಚ ತಗುಲಲಿದೆ. ಸಂಚಿತ ನಿಧಿಯಿಂದನಿವೃತ್ತಿ ಸಮಯದಲ್ಲಿಹಿಂಪಡೆಯುವ ಸಂಪೂರ್ಣ ಮೊತ್ತಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.</p>.<p>‘ಈ ಯೋಜನೆಗೆ ನೌಕರರ ಕನಿಷ್ಠ ಪಾಲು ಶೇ 10ರಷ್ಟೇ ಇರಲಿದೆ’ ಎಂದು ಜೇಟ್ಲಿ ಹೇಳಿದ್ದಾರೆ.</p>.<p>ಈ ಮೂಲಕ ಚುನಾವಣಾ ವರ್ಷದಲ್ಲಿ ಕೇಂದ್ರ ಸರ್ಕಾರದ ನೌಕರರಿಗೆ ಕೇಂದ್ರವು ಭರ್ಜರಿ ಕೊಡುಗೆ ನೀಡಿದೆ. 18 ಲಕ್ಷ ನೌಕರರಿಗೆ ಇದರ ಪ್ರಯೋಜನ ಸಿಗಲಿದೆ.</p>.<p>ಅಲ್ಲದೆ, ಸರ್ಕಾರಿ ನೌಕರರಿಗೆ ನಿವೃತ್ತಿ ಸಮಯದಲ್ಲಿ ಹೆಚ್ಚಿನ ಮೊತ್ತವನ್ನು ಹಿಂತೆಗೆದುಕೊಳ್ಳಲು ಈಗ ಅವಕಾಶ ನೀಡಲಾಗಿದೆ. ನಿವೃತ್ತಿಯ ಸಮಯದಲ್ಲಿ ಶೇ 60ರಷ್ಟು ಸಂಚಿತ ನಿಧಿಯನ್ನು ಒಂದೇ ಬಾರಿಗೆ ತೆಗೆದುಕೊಳ್ಳಲು ಕೇಂದ್ರ ಅವಕಾಶ ಮಾಡಿಕೊಟ್ಟಿದೆ. ಇದು, ಪ್ರಸ್ತುತ ಶೇ 40ರಷ್ಟಿದೆ.</p>.<p>‘ಒಂದೇ ಬಾರಿಗೆ ಹಿಂಪಡೆಯುವ ಮೊತ್ತಕ್ಕೆ ತೆರಿಗೆ ವಿನಾಯಿತಿ ಮಿತಿಯನ್ನು ಶೇ 60ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ನಿವೃತ್ತಿ ಸಮಯದಲ್ಲಿ ಹಿಂಪಡೆಯುವಸಂಪೂರ್ಣ ಮೊತ್ತಕ್ಕೆ ಆದಾಯ ತೆರಿಗೆ ವಿನಾಯಿತಿ ಸಿಗಲಿದೆ. ಇದೊಂದು ಪ್ರಮುಖ ಬದಲಾವಣೆ’ ಎಂದು ಜೇಟ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರೀಯ ಪಿಂಚಣಿ ಯೋಜನೆಗೆ (ಎನ್ಪಿಎಸ್) ಕೇಂದ್ರ ಸರ್ಕಾರದ ಪಾಲನ್ನು ನೌಕರರ ಮೂಲ ವೇತನದ ಶೇ 14ರಷ್ಟಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೊದಲು ಇದು ಶೇ 10ರಷ್ಟಿತ್ತು ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸೋಮವಾರ ಹೇಳಿದ್ದಾರೆ.</p>.<p>ಈ ನಿರ್ಧಾರದಿಂದ 2019–2020ನೇ ವರ್ಷದಲ್ಲಿ ಸರ್ಕಾರಕ್ಕೆ ₹2,840 ಕೋಟಿ ಹೆಚ್ಚುವರಿ ವೆಚ್ಚ ತಗುಲಲಿದೆ. ಸಂಚಿತ ನಿಧಿಯಿಂದನಿವೃತ್ತಿ ಸಮಯದಲ್ಲಿಹಿಂಪಡೆಯುವ ಸಂಪೂರ್ಣ ಮೊತ್ತಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.</p>.<p>‘ಈ ಯೋಜನೆಗೆ ನೌಕರರ ಕನಿಷ್ಠ ಪಾಲು ಶೇ 10ರಷ್ಟೇ ಇರಲಿದೆ’ ಎಂದು ಜೇಟ್ಲಿ ಹೇಳಿದ್ದಾರೆ.</p>.<p>ಈ ಮೂಲಕ ಚುನಾವಣಾ ವರ್ಷದಲ್ಲಿ ಕೇಂದ್ರ ಸರ್ಕಾರದ ನೌಕರರಿಗೆ ಕೇಂದ್ರವು ಭರ್ಜರಿ ಕೊಡುಗೆ ನೀಡಿದೆ. 18 ಲಕ್ಷ ನೌಕರರಿಗೆ ಇದರ ಪ್ರಯೋಜನ ಸಿಗಲಿದೆ.</p>.<p>ಅಲ್ಲದೆ, ಸರ್ಕಾರಿ ನೌಕರರಿಗೆ ನಿವೃತ್ತಿ ಸಮಯದಲ್ಲಿ ಹೆಚ್ಚಿನ ಮೊತ್ತವನ್ನು ಹಿಂತೆಗೆದುಕೊಳ್ಳಲು ಈಗ ಅವಕಾಶ ನೀಡಲಾಗಿದೆ. ನಿವೃತ್ತಿಯ ಸಮಯದಲ್ಲಿ ಶೇ 60ರಷ್ಟು ಸಂಚಿತ ನಿಧಿಯನ್ನು ಒಂದೇ ಬಾರಿಗೆ ತೆಗೆದುಕೊಳ್ಳಲು ಕೇಂದ್ರ ಅವಕಾಶ ಮಾಡಿಕೊಟ್ಟಿದೆ. ಇದು, ಪ್ರಸ್ತುತ ಶೇ 40ರಷ್ಟಿದೆ.</p>.<p>‘ಒಂದೇ ಬಾರಿಗೆ ಹಿಂಪಡೆಯುವ ಮೊತ್ತಕ್ಕೆ ತೆರಿಗೆ ವಿನಾಯಿತಿ ಮಿತಿಯನ್ನು ಶೇ 60ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ನಿವೃತ್ತಿ ಸಮಯದಲ್ಲಿ ಹಿಂಪಡೆಯುವಸಂಪೂರ್ಣ ಮೊತ್ತಕ್ಕೆ ಆದಾಯ ತೆರಿಗೆ ವಿನಾಯಿತಿ ಸಿಗಲಿದೆ. ಇದೊಂದು ಪ್ರಮುಖ ಬದಲಾವಣೆ’ ಎಂದು ಜೇಟ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>