<p><strong>ನವದೆಹಲಿ:</strong> ಸಂಸತ್ ಕಲಾಪದ ಸುಗಮ ಕಾರ್ಯನಿರ್ವಹಣೆಗೆ ಪೂರಕವಾಗಿ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಭೇಟಿಯಾಗಿ ಸಹಕಾರ ಕೋರಿದರು.</p>.<p>17ನೇ ಲೋಕಸಭೆ ಮೊದಲ ಅಧಿವೇಶನ ಜೂನ್ 17ರಂದು ಆರಂಭವಾಗಲಿದೆ.ಸಂಸತ್ ಅಧಿವೇಶನ ಜುಲೈ 26ರವರೆಗೂ ನಡೆಯಲಿದ್ದು, ಬಜೆಟ್ ಅನ್ನು ಜುಲೈ 5ರಂದು ಮಂಡಿಸಲಾಗುತ್ತದೆ.</p>.<p>‘ಈ ಭೇಟಿ ಔಪಚಾರಿಕ. ಸಂಸತ್ತಿನ ಸುಗಮ ಕಾರ್ಯ ನಿರ್ವಹಣೆಗೆ ನಾವು ಸಹಕಾರ ಕೋರಿದೆವು. ಆಡಳಿತ ಪಕ್ಷದಿಂದಲೂ ನಮಗೆ ಸಹಕಾರ ಬೇಕು ಎಂದು ಸೋನಿಯಾ ಕೋರಿದರು’ ಎಂದು ಜೋಶಿ ನಂತರ ತಿಳಿಸಿದರು.</p>.<p>ವಿಪಕ್ಷಗಳಿಗೆ ಸರ್ಕಾರ ಎಲ್ಲ ಸಹಕಾರವನ್ನು ನೀಡುವುದಾಗಿ ನಾವು ಭರವಸೆ ನೀಡಿದೆವು ಎಂದು ತಿಳಿಸಿದರು. ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೊಮರ್ ಮತ್ತು ಅರ್ಜುನ್ ರಾಮ್ ಮೇಘವಾಲ್ ಅವರು ಇದ್ದರು.</p>.<p>ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸರ್ಕಾರದ ಉದ್ದೇಶದ ಭಾಗವಾಗಿ ಜೋಶಿ ಮತ್ತು ಸೋನಿಯಾ ಅವರ ಭೇಟಿ ನಡೆಯಿತು. ಸುಮಾರು 15 ನಿಮಿಷಗಳ ಕಾಲ ಅವರು ಮಾತುಕತೆ ನಡೆಸಿದ್ದಾರೆ.</p>.<p>ಜೋಶಿ ಈ ಹಿಂದೆ ರಾಜ್ಯಸಭೆಯಲ್ಲಿನ ವಿರೋಧಪಕ್ಷದ ನಾಯಕ ಗುಲಾಂ ನಬಿ ಆಜಾದ್ ಮತ್ತು ಲೋಕಸಭೆಯಲ್ಲಿ ಡಿಎಂಕೆ ನಾಯಕ ಟಿ.ಆರ್.ಬಾಲು ಅವರನ್ನೂ ಭೇಟಿ ಆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂಸತ್ ಕಲಾಪದ ಸುಗಮ ಕಾರ್ಯನಿರ್ವಹಣೆಗೆ ಪೂರಕವಾಗಿ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಭೇಟಿಯಾಗಿ ಸಹಕಾರ ಕೋರಿದರು.</p>.<p>17ನೇ ಲೋಕಸಭೆ ಮೊದಲ ಅಧಿವೇಶನ ಜೂನ್ 17ರಂದು ಆರಂಭವಾಗಲಿದೆ.ಸಂಸತ್ ಅಧಿವೇಶನ ಜುಲೈ 26ರವರೆಗೂ ನಡೆಯಲಿದ್ದು, ಬಜೆಟ್ ಅನ್ನು ಜುಲೈ 5ರಂದು ಮಂಡಿಸಲಾಗುತ್ತದೆ.</p>.<p>‘ಈ ಭೇಟಿ ಔಪಚಾರಿಕ. ಸಂಸತ್ತಿನ ಸುಗಮ ಕಾರ್ಯ ನಿರ್ವಹಣೆಗೆ ನಾವು ಸಹಕಾರ ಕೋರಿದೆವು. ಆಡಳಿತ ಪಕ್ಷದಿಂದಲೂ ನಮಗೆ ಸಹಕಾರ ಬೇಕು ಎಂದು ಸೋನಿಯಾ ಕೋರಿದರು’ ಎಂದು ಜೋಶಿ ನಂತರ ತಿಳಿಸಿದರು.</p>.<p>ವಿಪಕ್ಷಗಳಿಗೆ ಸರ್ಕಾರ ಎಲ್ಲ ಸಹಕಾರವನ್ನು ನೀಡುವುದಾಗಿ ನಾವು ಭರವಸೆ ನೀಡಿದೆವು ಎಂದು ತಿಳಿಸಿದರು. ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೊಮರ್ ಮತ್ತು ಅರ್ಜುನ್ ರಾಮ್ ಮೇಘವಾಲ್ ಅವರು ಇದ್ದರು.</p>.<p>ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸರ್ಕಾರದ ಉದ್ದೇಶದ ಭಾಗವಾಗಿ ಜೋಶಿ ಮತ್ತು ಸೋನಿಯಾ ಅವರ ಭೇಟಿ ನಡೆಯಿತು. ಸುಮಾರು 15 ನಿಮಿಷಗಳ ಕಾಲ ಅವರು ಮಾತುಕತೆ ನಡೆಸಿದ್ದಾರೆ.</p>.<p>ಜೋಶಿ ಈ ಹಿಂದೆ ರಾಜ್ಯಸಭೆಯಲ್ಲಿನ ವಿರೋಧಪಕ್ಷದ ನಾಯಕ ಗುಲಾಂ ನಬಿ ಆಜಾದ್ ಮತ್ತು ಲೋಕಸಭೆಯಲ್ಲಿ ಡಿಎಂಕೆ ನಾಯಕ ಟಿ.ಆರ್.ಬಾಲು ಅವರನ್ನೂ ಭೇಟಿ ಆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>