ನವದೆಹಲಿ: ನೂತನ ಪಿಂಚಣಿ ಯೋಜನೆ (ಎನ್ಪಿಎಸ್) ವಿರೋಧಿಸಿ ಮಾರ್ಚ್ 13ರಂದು ಮುಷ್ಕರ ಹೂಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ತನ್ನ ನೌಕರರಿಗೆ ಎಚ್ಚರಿಕೆ ನೀಡಿದೆ.
‘ಯಾವುದೇ ರೀತಿಯ ಮುಷ್ಕರ ನಡೆಸುವ ನೌಕರರ ವೇತನದಲ್ಲಿ ಕಡಿತ ಮಾಡಲಾಗುವುದು. ಇದರ ಜೊತೆಗೆ ಶಿಸ್ತುಕ್ರಮವನ್ನೂ ಜರುಗಿಸಲಾಗುವುದು’ ಎಂದು ಕೇಂದ್ರದ ಸಿಬ್ಬಂದಿ ಸಚಿವಾಲಯ ಹೇಳಿದೆ.
‘ಮುಷ್ಕರ ನಡೆಸಲು ನಿಗದಿಪಡಿಸಿರುವ ಅವಧಿಯಲ್ಲಿ ಯಾವುದೇ ನೌಕರಗೆ ರಜೆ ನೀಡಬಾರದು. ಕರ್ತವ್ಯ ನಿರ್ವಹಿಸಲು ಬರುವ ನೌಕರರು ಕಚೇರಿಯನ್ನು ಪ್ರವೇಶಿಸಲು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ದೇಶದಲ್ಲಿ 48.41 ಲಕ್ಷ ಕೇಂದ್ರ ಸರ್ಕಾರಿ ನೌಕರರು ಇದ್ದಾರೆ.