ಶ್ರೀನಗರ: ಶ್ರೀನಗರದ ಜೀರೊ ಸೇತುವೆ ಬಳಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಇಬ್ಬರು ಸಂಚಾರ ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಬಾಘ್ನಲ್ಲಿರುವ ಈ ಸೇತುವೆಯ ಟ್ರಾಫಿಕ್ ಸಿಗ್ನಲ್ ಬಳಿ ಉಗ್ರರು ಗುರುವಾರ ದಾಳಿ ನಡೆಸಿದ್ದು, ಅವರ ಪತ್ತೆಗೆ ಭದ್ರತಾ ಸಿಬ್ಬಂದಿ ಶೋಧ ಆರಂಭಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ ನಡೆದ 100 ಮೀಟರ್ ದೂರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ (ಎನ್ಸಿಪಿ) ಮುಖ್ಯ ಕಚೇರಿ ಹಾಗೂ ಆಲ್ ಇಂಡಿಯಾ ರೇಡಿಯೊದ ಸ್ಥಳೀಯ ಕಚೇರಿ ಇದೆ.