‘ಕಳಸಾ ಬಂಡೂರಿ ಯೋಜನೆ ತಡೆ ಹಿಡಿಯುವ ಸಂಬಂಧ ಯಾವುದೇ ಆದೇಶ ಹೊರಡಿಸಿಲ್ಲ. ಕುಡಿಯುವ ನೀರಿನ ಯೋಜನೆಗೆ ಪರಿಸರ ಇಲಾಖೆಯಿಂದ ಪರಿಸರ ಅನುಮತಿ(ಇಸಿ) ಪಡೆಯುವ ಅಗತ್ಯವಿಲ್ಲವೆಂಬ ನಿಯಮ ಮತ್ತು 2006 ರ ಪರಿಸರ ಹಾನಿ ಕುರಿತ ಮೌಲ್ಯಮಾಪನ(ಇಐಎ) ಅಧಿಸೂಚನೆಗೆ ತಡೆ ನೀಡಿದ್ದೇವೆ ಎಂಬುದು ತಪ್ಪು ಮಾಹಿತಿ’ ಎಂದು ಪತ್ರದಲ್ಲಿ ಜಾವಡೇಕರ್ ಸ್ಪಷ್ಟ ಪಡಿಸಿದ್ದಾರೆ. ‘ರಾಜ್ಯದ ಜನರ ಸಂದೇಹ ನಿವಾರಣೆಗೆ ನೀವೇ ಖುದ್ದಾಗಿ ಪತ್ರ ಬರೆದು ಸ್ಪಷ್ಟ ಪಡಿಸಿದರೆ ಜನರಲ್ಲಿರುವ ಗೊಂದಲ, ಆತಂಕ ನಿವಾರಣೆಯಾಗಲಿದೆ’ ಎಂದು ಬೊಮ್ಮಾಯಿ ಮನವಿ ಮಾಡಿದ್ದರು. ಆ ಪ್ರಕಾರ ಜಾವಡೇಕರ್ ಪತ್ರ ಬರೆದಿದ್ದಾರೆ.