ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ ಮಾರುಕಟ್ಟೆಯಲ್ಲಿ ಗ್ರೆನೇಡ್ ದಾಳಿ : ಓರ್ವ ಸಾವು, 25 ಮಂದಿಗೆ ಗಾಯ

Last Updated 4 ನವೆಂಬರ್ 2019, 11:34 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಮೌಲಾನ ಆಜಾದ್ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ ಗ್ರೆನೇಡ್ ದಾಳಿ ನಡೆದಿದೆ.ಸೋಮವಾರ ಮಧ್ಯಾಹ್ನ ಈ ದಾಳಿ ನಡೆದಿದ್ದು ಇದರಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದಾರೆ.25 ಮಂದಿಗೆ ಗಾಯಗಳಾಗಿವೆ.

ಹರಿ ಸಿಂಗ್ ಹೈ ಸ್ಟ್ರೀಟ್‌ನಲ್ಲಿ ಈ ದಾಳಿ ನಡೆದಿದ್ದು, ಗಾಯಗೊಂಡವರು ಸ್ಥಳೀಯರಾಗಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

9 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು ಇದರಲ್ಲಿ ಒಬ್ಬರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ರಾಯಿಟರ್ಸ್ ವರದಿ ಉಲ್ಲೇಖಿಸಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ಹೇಳಿದೆ.

ಉತ್ತರ ಕಾಶ್ಮೀರದ ಸೋಪೋರ್‌ನಲ್ಲಿ ಅಕ್ಟೋಬರ್ 28ರಂದು ಗ್ರೆನೇಡ್ ದಾಳಿ ನಡೆದಿದ್ದು 20ಮಂದಿ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT