ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಎಸ್‌ಟಿ: ಕೇಂದ್ರದಿಂದ ಆದಾಯ ನಷ್ಟ ಪರಿಹಾರ; ರಾಜ್ಯಕ್ಕೆ ₹4,313 ಕೋಟಿ ಬಿಡುಗಡೆ

Last Updated 5 ಜೂನ್ 2020, 14:26 IST
ಅಕ್ಷರ ಗಾತ್ರ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕಾಯ್ದೆ ಅನ್ವಯ ಆದಾಯ ನಷ್ಟ ಪರಿಹಾರವಾಗಿ ಕೇಂದ್ರ ಸರ್ಕಾರವು ಶುಕ್ರವಾರ ರಾಜ್ಯಕ್ಕೆ ₹4,313.13 ಕೋಟಿ ನೆರವನ್ನು ಬಿಡುಗಡೆ ಮಾಡಿದೆ.

2019ರ ಡಿಸೆಂಬರ್‌ನಿಂದ 2020ರ ಫೆಬ್ರುವರಿ ಅವಧಿಯಲ್ಲಿ ಕರ್ನಾಟಕ ಎದುರಿಸಿರುವ ಆದಾಯ ನಷ್ಟದ ಪರಿಹಾರ ರೂಪದಲ್ಲಿ ಈ ನೆರವನ್ನು ಒದಗಿಸಲಾಗಿದೆ ಎಂದು ಕೇಂದ್ರದ ಹಣಕಾಸು ಸಚಿವಾಲಯದ ಆದೇಶ ತಿಳಿಸಿದೆ.

2017ರ ಜುಲೈ 1ರಂದು ಜಾರಿಯಾದ ಜಿಎಸ್‌ಟಿ ಕಾಯ್ದೆಯ ಅನ್ವಯ ಕೇಂದ್ರವು ಐದು ವರ್ಷಗಳ ಕಾಲ ರಾಜ್ಯಗಳಿಗೆ ಈ ನಷ್ಟ ಪರಿಹಾರ ಒದಗಿಸಲಿದೆ. ಕೊರೊನಾ ತಡೆ ನಿಟ್ಟಿನಲ್ಲಿ ಘೋಷಿಸಲಾದ ಲಾಕ್‌ಡೌನ್‌ನಿಂದ ಆದಾಯದಲ್ಲಿ ನಷ್ಟ ಅನುಭವಿಸಿರುವ ರಾಜ್ಯ ಸರ್ಕಾರಗಳಿಗೆ ಈ ಪರಿಹಾರ ಬಿಡುಗಡೆ ಮಾಡಿದ್ದರಿಂದ ಅನುಕೂಲವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT