ಗುರುಚರಣ್ ಕಾಲೇಜಿನ ಭೌತಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಇವರನ್ನು, ವಿದ್ಯಾರ್ಥಿಯೊಬ್ಬ ನೀಡಿದ ದೂರು ಆಧರಿಸಿ ಶುಕ್ರವಾರ ರಾತ್ರಿ ಬಂಧಿಸಲಾಗಿದೆ.
ಸೌರವ್ದೀಪ್ ತಮ್ಮ ಫೇಸ್ಬುಕ್ ಪೋಸ್ಟ್ಗಳಲ್ಲಿ ಸಮುದಾಯವೊಂದನ್ನು ಗುರಿಯಾಗಿಸಿದ್ದರು ಎಂಬ ಆರೋಪವೂ ಇದೆ. ಅವರನ್ನು ಸೇವೆಯಿಂದ ತೆಗೆಯಲು ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಯನ್ನೂ ನಡೆಸಿದ್ದರು. ಅವಹೇಳನಕಾರಿ ಪೋಸ್ಟ್ ಹಾಕಿದಕ್ಕಾಗಿ ಹಲವು ಬಾರಿ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯಾಚಿಸಿರುವುದಾಗಿ ಆತನ ಕುಟುಂಬದವರು ತಿಳಿಸಿದರು.