ಮುಖ್ಯನ್ಯಾಯಮೂರ್ತಿ ರಂಜನ್ ಗೋಗೊಯಿ, ನ್ಯಾಯಮೂರ್ತಿಗಳಾದ ಎಲ್.ಎನ್.ರಾವ್ ಹಾಗೂ ಸಂಜೀವ್ ಖನ್ನಾ ಅವರನ್ನು ಒಳಗೊಂಡ ಪೀಠ, ‘ಉಭಯ ಅಧಿಕಾರಿಗಳು ಬೇಷರತ್ತಾಗಿ ಕ್ಷಮೆ ಯಾಚಿಸಿದ್ದರೂ ಅದನ್ನು ಪರಿಗಣಿಸುವ ಪ್ರಶ್ನೆಯೇ ಇಲ್ಲ. ನನಗೆ ಏನು ಮಾಡಬೇಕು ಎನಿಸಿತ್ತೋ ಅದನ್ನು ಮಾಡಿದ್ದೇನೆ ಎಂಬ ಧೋರಣೆ ರಾವ್ ಅವರದ್ದಾಗಿದೆ. ಇದು ನ್ಯಾಯಾಂಗ ನಿಂದನೆ ಅಲ್ಲದೇ ಮತ್ತೇನು’ ಎಂದು ಪ್ರಶ್ನಿಸಿತು.