ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆಕೊಟ್ಟು ಗ್ರಾಮೀಣ ಅಂಚೆ ಸೇವೆಯನ್ನು ಅಕ್ಷರಶಃ ಬಂದ್ ಮಾಡಿದ್ದರೂ ಕೇಂದ್ರ ಸರ್ಕಾರ ಮಾತುಕತೆಗೆ ಮುಂದಾಗಿಲ್ಲ. ಬೃಹತ್ ಪ್ರತಿಭಟನೆಯಿಂದ ಗ್ರಾಮೀಣ ಭಾಗದ ಜನರಿಗೆ ತೊಂದರೆಯಾಗಿದೆ ಎಂಬುದು ನಿಜ. ಆದರೆ, ನಮ್ಮ ನೋವನ್ನು ಪರಿಹರಿಸಬೇಕಾಗಿದೆ. ಸರ್ಕಾರ ಈಗಲಾದರೂ ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ತಕ್ಷಣ ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದು ಪ್ರತಿಭಟನಾಕಾರರು ತಿಳಿಸಿದರು.