ಬುಧವಾರ ರಾತ್ರಿ ನಗರದ ಕೇಂದ್ರ ಭಾಗದಲ್ಲಿದ್ದ ಮಾಲ್ ಮುಂಭಾಗದಲ್ಲಿ ನಡೆದ ಗ್ರೆನೇಡ್ ಸ್ಫೋಟದ ಬೆನ್ನಲ್ಲೇ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.ಘಟನೆ ಕುರಿತು ಸೂಕ್ತ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಲು ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದರು.ಮನೆಯಲ್ಲಿಬಾಂಬ್, ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳ ತಯಾರಿಗೆ ಬಳಸುವ ವಸ್ತುಗಳು, ಲ್ಯಾಪ್ಟಾಪ್ಪತ್ತೆಯಾಗಿವೆ.ಮನೆಯಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆಎಂದು ಪೊಲೀಸ್ ಮೂಲಗಳು ತಿಳಿಸಿವೆ.