ಡೆಹ್ರಾಡೂನ್: ಉನ್ನತ ಶಿಕ್ಷಣ ಕುರಿತ ರಾಷ್ಟ್ರೀಯ ಸಮ್ಮೇಳನ‘ಜ್ಞಾನಕುಂಭ’ ಹರಿದ್ವಾರದಲ್ಲಿ ಶನಿವಾರದಿಂದ (ನ.3) ಆರಂಭವಾಗಲಿದೆ.
ಎರಡು ದಿನಗಳ ಸಮಾರಂಭದಲ್ಲಿ ನೂರಾರು ಶಿಕ್ಷಣ ತಜ್ಞರು, 18 ರಾಜ್ಯಗಳ ಶಿಕ್ಷಣ ಸಚಿವರು ಭಾಗಿಯಾಗಲಿದ್ದಾರೆ. ಪತಂಜಲಿ ಯೋಗಪೀಠದಲ್ಲಿ ನಡೆಯುವ ಕಾರ್ಯಕ್ರಮವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟಿಸಲಿದ್ದಾರೆ.
1,800 ನಿಯೋಗಗಳು, ನೀತಿ ನಿರೂಪಕರು, ವಿಶ್ವವಿದ್ಯಾಲಯಗಳ ಕುಲಪತಿಗಳು, ಕಾಲೇಜುಗಳ ಪ್ರಾಂಶುಪಾಲರು, ಸಂಶೋಧಕರು ಮತ್ತು ವಿದ್ಯಾರ್ಥಿಗಳೂ ಪಾಲ್ಗೊಳ್ಳಲಿದ್ದಾರೆ.
ಉನ್ನತ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ತೆಗೆದುಕೊಳ್ಳಬೇಕಾದ ನೂತನ ಕ್ರಮಗಳು, ಸಲಹೆಗಳ ಬಗ್ಗೆ ಸಮಾವೇಶದಲ್ಲಿ ಚರ್ಚೆ ನಡೆಯಲಿದೆ.