ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಜನರಲ್ಲಿ ಮನವಿ ಮಾಡಿದ್ದು, ಸೌಹಾರ್ದ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಬೊರಾ ಮತ್ತು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಅಲ್ಲದೆ, ಪರಿಸರ ಸಚಿವ ಪರಿಮಲ್ ಶುಕ್ಲವೈದ್ಯ, ಎಡಿಜಿಪಿ ಮುಖೇಶ್ ಅಗರ್ವಾಲಾ, ಬರಾಕ್ ಕಣಿವೆ ಪ್ರದೇಶದ ಆಯುಕ್ತ ಅನ್ವರುದ್ದೀನ್ ಚೌಧರಿ ಅವರಿಗೆ ಪರಿಸ್ಥಿತಿ ನಿಯಂತ್ರಿಸುವ ಜವಾಬ್ದಾರಿ ನೀಡಿದ್ದಾರೆ.