ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳೆಗೇರಿ ಪ್ರದೇಶದ ಮನೆಯಲ್ಲಿ ಶಾಸಕರ ವಾಸ್ತವ್ಯ

Last Updated 11 ಫೆಬ್ರುವರಿ 2018, 11:16 IST
ಅಕ್ಷರ ಗಾತ್ರ

ಕಲಬುರ್ಗಿ: ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ ಹಾಗೂ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಕ್ರಮವಾಗಿ ಇಲ್ಲಿನ ಸಂಜೀವ ನಗರ ಮತ್ತು ಸುಂದರ ನಗರದ ಕೊಳೆಗೇರಿ ಪ್ರದೇಶಗಳ ಮನೆಯಲ್ಲಿ ಶನಿವಾರ ವಾಸ್ತವ್ಯ ಮಾಡಿದರು.

‘ಲಕ್ಷ್ಮಣ ಜೇವಳಗಿ ಮತ್ತು ಮಲ್ಲಮ್ಮ ಚಿಂಚೋಳಿ ಅವರ ಕುಟುಂಬದ ಸದಸ್ಯರ ಜತೆ ಸಮಾಲೋಚನೆ ನಡೆಸಿದ ಶಾಸಕರು, ಅವರ ಕಷ್ಟಗಳನ್ನು ಆಲಿಸಿದರು. ಸರ್ಕಾರದಿಂದ ದೊರಕಿರುವ ಸೌಲಭ್ಯಗಳ ಬಗ್ಗೆ ವಿಚಾರಿಸಿದರು. ಅಲ್ಲದೆ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವಿವರಿಸಿದರು’ ಎಂದು ಶಾಸಕರ ಆಪ್ತ ಮೂಲಗಳು ತಿಳಿಸಿವೆ.

ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ಜನರ ಸಂಕಷ್ಟ ಅರಿತು ಪರಿಹಾರ ಕಲ್ಪಿಸಲು ಬಿಜೆಪಿ ಸ್ಲಂ ಮೋರ್ಚಾ ಈಗಾಗಲೇ ಸಮೀಕ್ಷೆ ನಡೆಸಿದ್ದು, ‘ಸ್ಲಮ್ ದುರ್ಭಾಗ್ಯ–ಇದು ನಾಗರಿಕತೆಯಲ್ಲ ನರಕದ ಕತೆ’ ಎಂಬ ಪುಸ್ತಕ ಸಿದ್ಧಪಡಿಸಿದೆ. ಇದನ್ನು ಫೆ. 11ರಂದು ಬಿಡುಗಡೆ ಮಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT