‘2015ರ ಪಾಟಿದಾರ್ ಚಳವಳಿಯ ಸಂದರ್ಭದಲ್ಲಿ ನಡೆದ ಗಲಭೆಯಲ್ಲಿ ಹಾರ್ದಿಕ್ ಅವರ ಕೈವಾಡವಿದೆ ಎಂಬುದು ಸಾಬೀತಾಗಿದೆ’ ಎಂದಿದ್ದ ಮೆಹ್ಸಾನಾ ಸೆಷನ್ಸ್ ಕೋರ್ಟ್, ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಆನಂತರ ಹೈಕೋರ್ಟ್ ಇವರ ಶಿಕ್ಷೆಯನ್ನು ಅಮಾನತು ಮಾಡಿದ್ದರೂ, ಸೆಷನ್ಸ್ ಕೋರ್ಟ್ನ ತೀರ್ಪನ್ನು ರದ್ದು ಮಾಡಿರಲಿಲ್ಲ. ಈಗ ಲೋಕಸಭಾ ಚುನಾವಣೆಯಲ್ಲಿ ಜಾಮ್ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿರುವ ಹಾರ್ದಿಕ್ ಅವರು, ಹೈಕೋರ್ಟ್ನ ತೀರ್ಪಿಗೆ ತಡೆಯಾಜ್ಞೆ ನೀಡಬೇಕು ಎಂದು ಮಾರ್ಚ್ 29ರಂದು ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದಲ್ಲದೆ ತನ್ನ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಎತ್ತಿಕೊಳ್ಳಬೇಕು ಎಂದು ವಿನಂತಿಸಿದ್ದರು.