ಅಹಮದಾಬಾದ್: ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಅವರನ್ನು ಅಹಮದಾಬಾದ್ ಜಿಲ್ಲೆಯ ವೀರಂಗಾಂನಲ್ಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ವಿಚಾರಣೆಗೆ ಹಾಜರಾಗದ ಕಾರಣ ಅವರ ಬಂಧನಕ್ಕೆ ಇಲ್ಲಿನ ಸೆಷನ್ಸ್ ಕೋರ್ಟ್ ವಾರಂಟ್ ಜಾರಿ ಮಾಡಿದ ಕೆಲವೇ ಗಂಟೆಯಲ್ಲಿ ಹಾರ್ದಿಕ್ ಅವರನ್ನು ಬಂಧಿಸಲಾಗಿದೆ.
ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ 2015ರಲ್ಲಿ ಹಾರ್ದಿಕ್ ನೇತೃತ್ವದಲ್ಲಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆಗ ಇವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.