ಫತೇಗಡ ಸಾಹಿಬ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅವರು ಕೇಂದ್ರ ಸಚಿವ ಅರುಣ್ ಜೇಟ್ಲಿ ಸಮ್ಮುಖದಲ್ಲಿ ಕಮಲ ಪಾಳಯ ಸೇರಿದರು. ಪರಿಶಿಷ್ಟ ಜಾತಿಗೆ ಸೇರಿರುವ ಖಾಲ್ಸಾ 2014ರ ಚುನಾವಣೆಯಲ್ಲಿ ಎಎಪಿ ಟಿಕೆಟ್ನಲ್ಲಿ ಗೆದ್ದಿದ್ದರು. 2015ರಲ್ಲಿ ಪಕ್ಷ ಇವರನ್ನು ಉಚ್ಚಾಟಿಸಿತ್ತು. ಬಿಜೆಪಿ ಮಿತ್ರಪಕ್ಷ ಶಿರೋಮಣಿ ಅಕಾಲಿದಳದ ಮೂಲಕ ಖಾಲ್ಸಾ ಅವರು ರಾಜಕೀಯ ಜೀವನ ಆರಂಭಿಸಿದ್ದರು.