’ಬೇಟಿ ಬಚಾವೊ, ಬೇಟಿ ಪಢಾವೊ‘ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಖಟ್ಟರ್, ‘ರಾಜ್ಯದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆಯಾಗಿ ಗಂಡುಮಕ್ಕಳ ಸಂಖ್ಯೆ ಹೆಚ್ಚಿರುವುದರಿಂದ ಬಿಹಾರದ ಯುವತಿಯರನ್ನು ವಿವಾಹವಾಗಬಹುದು ಎಂದು ನಮ್ಮ ಸಚಿವ ಧನಕರ್ ಅವರು ಹೇಳುತ್ತಿದ್ದರು. ಆದರೆ ಈಗ ಕಾಶ್ಮೀರವೂ ಮುಕ್ತವಾಗಿದೆ, ಅಲ್ಲಿಂದಲೂ ಯುವತಿಯರನ್ನು ಕರೆತಂದು ವಿವಾಹವಾಗಬಹುದು ಎಂಬುದಾಗಿ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ತಮಾಷೆ ಏನೇ ಇರಲಿ; ಲಿಂಗಾನುಪಾತ ಸಮತೋಲನದಲ್ಲಿದ್ದರೆ ಸಮಾಜಕ್ಕೆ ಒಳ್ಳೆಯದು’ ಎಂದು ಹೇಳಿದ್ದಾರೆ. ಹರಿಯಾಣದ ಫತೇಹಾಬಾದ್ನಲ್ಲಿ ಶುಕ್ರವಾರ ನಡೆದ ರ್ಯಾಲಿಯಲ್ಲಿ ಖಟ್ಟರ್ ಈ ಹೇಳಿಕೆ ನೀಡಿದ್ದಾರೆ ಎಂದುಎಎನ್ಐಸುದ್ದಿಸಂಸ್ಥೆ ವರದಿ ಮಾಡಿದೆ.