ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣದಲ್ಲಿ ಸೋತ ಪ್ರಮುಖ ನಾಯಕರು

Last Updated 24 ಅಕ್ಟೋಬರ್ 2019, 10:50 IST
ಅಕ್ಷರ ಗಾತ್ರ

ಚಂಡೀಗಡ: ತೀವ್ರ ಕುತೂಹಲ ಕೆರಳಿಸಿದ್ದ ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್‌ 30ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಉತ್ತಮ ಸಾಧನೆ ಮಾಡಿದ್ದು ಬಿಜೆಪಿ ಸರಳ ಬಹುಮತ ಪಡೆಯುವಲ್ಲಿ ವಿಫಲವಾಗಿದೆ.

ಕ್ರೀಡಾಪಟುಗಳು ಸೇರಿದಂತೆ ಸಾಮಾಜಿಕ ಜಾಲತಾಣಗಳ ಸ್ಟಾರ್‌ಗಳಿಗೆ ಬಿಜೆಪಿ ಈ ಸಲ ಟಿಕೆಟ್‌ ನೀಡಿತ್ತು. ಆದರೆ ನಿರೀಕ್ಷೆಯಂತೆ ಬಿಜೆಪಿಗೆ ಸ್ಥಾನಗಳ ಲಭ್ಯವಾಗಿಲ್ಲ. ಇನ್ನು ಕಾಂಗ್ರೆಸ್‌ ಪಕ್ಷ ಆಡಳಿತ ವಿರೋಧಿ ಅಲೆಯನ್ನು ಸರಿಯಾಗಿ ಬಳಕೆಮಾಡಿಕೊಂಡು 30ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಿದೆ.

ಬಿಜೆಪಿಯ ಬಬಿತಾ ಕುಮಾರಿ, ಕವಿತಾ ಜೈನ್‌ , ಕರಣ್‌ ದೇವ್‌, ಯೋಗಿಶ್ವರ್‌ ದತ್‌ ಹಾಗೂ ಅದಿತ್ಯಾ ಸೋತ ಪ್ರಮುಖ ವ್ಯಕ್ತಿಗಳಾಗಿದ್ದಾರೆ. ಮುಖ್ಯಮಂತ್ರಿ ಮನೋಹರ್ ಕಟ್ಟಾರ್‌ ಅವರ ಮಂತ್ರಿಮಂಡಳದ ಬಹುತೇಕ ಸಚಿವರು ಸೋತಿದ್ದಾರೆ. ಇಬ್ಬರು ಸಚಿವರು ಮಾತ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕಾಂಗ್ರೆಸ್‌ನ ರಣದೀಪ್‌ ಸಿಂಗ್‌ ಸುರ್ಜೆವಾಲ್‌, ರಣಬೀರ್‌ ಸಿಂಗ್ ಮಹೇಂದ್ರ ಸೋಲು ಕಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT