ಎರಡೂ ಗುಂಪುಗಳ ನಡುವೆ ರಾಜಿ ಮಾಡಲು ಪಂಜಾಬ್ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಮತ್ತು ಜಾತಿ ಪಂಚಾಯಿತಿಯ ಪ್ರಭಾವಿ ಮುಖಂಡರು ಶ್ರಮಿಸಿದ್ದಾರೆ. ಆದರೆ, ಅದು ಫಲ ನೀಡಿಲ್ಲ. ಈಗ, ಬಿಜೆಪಿ ಭಾರಿ ಪ್ರಬಲ ಎಂಬಂತೆ ಕಾಣಿಸುತ್ತಿರುವ ಈ ಸಂದರ್ಭದಲ್ಲಿ ಎರಡೂ ಪಕ್ಷಗಳು ಅಸ್ತಿತ್ವ ಕಳೆದುಕೊಳ್ಳುವುದು ಸನ್ನಿಹಿತ ಎಂದು ಹೇಳಲಾಗುತ್ತಿದೆ.