ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ತಬ್ಲಿಗಿ ಜಮಾತ್ ಸಮಾವೇಶ ಆಯೋಜಿಸಿದ ಹಿನ್ನೆಲೆಯಲ್ಲಿ ಸಾದ್ ಸೇರಿದಂತೆ ಏಳು ಮಂದಿಯ ವಿರುದ್ಧ ಮಾರ್ಚ್ 31ರಂದು ದೆಹಲಿ ಪೊಲೀಸರು ಪ್ರಕರಣ ದಾಖಲಿಸಿ, ಎಫ್ಆರ್ಆರ್ ಹಾಕಿದ್ದರು. ಅಲ್ಲದೆ, ಅಕ್ರಮ ಹಣ ವರ್ಗಾವಣೆ ಆರೋಪದಡಿ ಸಾದ್ ವಿರುದ್ದ ಜಾರಿ ನಿರ್ದೇಶನಾಲಯವೂ ಪ್ರಕರಣ ದಾಖಲಿಸಿಕೊಂಡಿದೆ.