‘ಅರ್ಜಿಯನ್ನು ತಕ್ಷಣವೇ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು’ ಎಂದು ಅರ್ಜಿದಾರರಾದ ವಕೀಲ ಎಂ.ಎಲ್.ಶರ್ಮಾ, ನ್ಯಾಯಮೂರ್ತಿಗಳಾದ ಜಿ.ಎಸ್.ಸಿಸ್ತಾನಿ ಹಾಗೂ ಸಿ. ಹರಿಶಂಕರ್ ಅವರಿದ್ದ ನ್ಯಾಯಪೀಠಕ್ಕೆ ಮನವಿ ಸಲ್ಲಿಸಿದರು. ‘ಫೆ.9ರಂದು ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಎರಡು ದಿನಗಳ ಹಿಂದಷ್ಟೇ 10 ಜನರನ್ನು ಬಂಧಿಸಿದ್ದಾರೆ. ಪ್ರಕರಣವನ್ನು ಶೀಘ್ರವೇ ಸಿಬಿಐಗೆ ಒಪ್ಪಿಸದೇ ಇದ್ದರೆ ಸಾಕ್ಷ್ಯ ನಾಶದ ಅಪಾಯವಿದೆ’ ಎಂದು ಶರ್ಮಾ ಪೀಠದ ಗಮನಕ್ಕೆ ತಂದರು.