ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲೇಗಾಂವ್ ಸ್ಫೋಟ ಪ್ರಕರಣ: ಪುರೋಹಿತ್‌ ವಿರುದ್ಧ ದೋಷಾರೋಪ ನಿಗದಿಗೆ ತಡೆ ಇಲ್ಲ

Last Updated 29 ಅಕ್ಟೋಬರ್ 2018, 18:32 IST
ಅಕ್ಷರ ಗಾತ್ರ

ಮುಂಬೈ: ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಅವರ ವಿರುದ್ಧ ದೋಷಾರೋಪ ನಿಗದಿಪಡಿಸುವ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.

ಯುಎಪಿ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸುವುದನ್ನು ಪ್ರಶ್ನಿಸಿಪುರೋಹಿತ್ ಸಲ್ಲಿಸಿರುವ ಅರ್ಜಿಯನ್ನು ಮುಂದಿನ ತಿಂಗಳು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎ.ಎಸ್.ಗಡ್ಕರಿ ಅವರ ಪೀಠ ಹೇಳಿದೆ.

ಪುರೋಹಿತ್ ಅವರ ಅರ್ಜಿಗೆ ನವೆಂಬರ್ 21ರೊಳಗೆ ಪ್ರತಿಕ್ರಿಯೆ ನೀಡುವಂತೆ ಎನ್‌ಐಎ ಪರ ವಕೀಲ ಸಂದೇಶ್ ಪಾಟೀಲ್ ಅವರಿಗೆ ಕೋರ್ಟ್ ನಿರ್ದೇಶನ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT