ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಜ್ಜನ್‌ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌

ಶರಣಾಗತಿಗೆ ಸಮಯ ವಿಸ್ತರಣೆ ಕೋರಿದ್ದ ಮುಖಂಡ
Last Updated 21 ಡಿಸೆಂಬರ್ 2018, 19:28 IST
ಅಕ್ಷರ ಗಾತ್ರ

ನವದೆಹಲಿ: 1984ರ ಸಿಖ್‌ ವಿರೋಧಿ ದಂಗೆ ಸಂಬಂಧ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್‌ ಕುಮಾರ್, ಶರಣಾಗಲು ಒಂದು ತಿಂಗಳು ಹೆಚ್ಚುವರಿ ಕಾಲಾವಕಾಶ ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ.

ಡಿಸೆಂಬರ್‌ 31ರೊಳಗೆ ಶರಣಾಗುವಂತೆ ಅವರಿಗೆ ನ್ಯಾಯಾಲಯ ಸೂಚಿಸಿತ್ತು.

ನ್ಯಾಯಮೂರ್ತಿಗಳಾದ ಎಸ್‌.ಮುರಳೀಧರ್‌ ಮತ್ತು ವಿನೋದ್‌ ಗೋಯಲ್‌ ಅವರನ್ನು ಒಳಗೊಂಡ ಪೀಠ, ‘ಶರಣಾಗತಿಗೆ ವಿನಾಯಿತಿ ನೀಡಲು ಸೂಕ್ತ ಆಧಾರಗಳಿಲ್ಲ’ ಎಂದು ಹೇಳಿದೆ.

ಇದೇ ಪೀಠ, 73 ವರ್ಷದ ಸಜ್ಜನ್‌ ಅವರಿಗೆ ಇದೇ 17ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು. ಆಸ್ತಿ ಮತ್ತು ಮಕ್ಕಳಿಗೆ ಸಂಬಂಧಿಸಿದ ಕೌಟುಂಬಿಕ ವ್ಯವಹಾರವನ್ನು ಇತ್ಯರ್ಥಪಡಿಸಬೇಕಿದೆ, ಅಲ್ಲದೆ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಮಯಾವಕಾಶ ಬೇಕಿದೆ ಎಂದು ಸಜ್ಜನ್‌ ಕಾರಣ ನೀಡಿದ್ದರು.

ಜೀವಾವಧಿ ಶಿಕ್ಷೆ ಆದೇಶ ಬಂದಾಗಿನಿಂದ ತಮ್ಮ ಕಕ್ಷಿದಾರರು ಆಘಾತಕ್ಕೆ ಒಳಗಾಗಿದ್ದಾರೆ ಮತ್ತು ಅವರು ತಾನು ಮುಗ್ಧ ಎಂದೇ ಭಾವಿಸಿದ್ದಾರೆ ಎಂದು ಸಜ್ಜನ್‌ ಪರ ವಕೀಲ ಅನಿಲ್‌ ಶರ್ಮಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT