ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್.ಜಿ.ಪಾಲಿಮರ್ಸ್‌ ಘಟಕ ಜಪ್ತಿಗೆ ಹೈಕೋರ್ಟ್ ಆದೇಶ

ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆ ಪ್ರಕರಣ
Last Updated 25 ಮೇ 2020, 18:03 IST
ಅಕ್ಷರ ಗಾತ್ರ

ಅಮರಾವತಿ: ವಿಷಾನಿಲ ಸೋರಿಕೆ ದುರಂತಕ್ಕೆ ಕಾರಣವಾಗಿದ್ದ ವಿಶಾಖಪಟ್ಟಣದ ಎಲ್.ಜಿ.ಪಾಲಿಮರ್ಸ್ ಘಟಕ ಜಪ್ತಿ ಮಾಡಲು ಆಂಧ್ರಪ್ರದೇಶ ಹೈಕೋರ್ಟ್ ಆದೇಶಿಸಿದೆ. ಸರ್ಕಾರ ನೇಮಿಸಿರುವ ಸಮಿತಿ ಸದಸ್ಯರನ್ನು ಹೊರತುಪಡಿಸಿ ಉಳಿದೆಲ್ಲರಿಗೂ ಪ್ರವೇಶ ನಿರ್ಬಂಧಿಸಿದೆ.

ಮೇ 22ರಂದು ನೀಡಿರುವ ಆದೇಶದಲ್ಲಿ ಕೋರ್ಟ್‌ ಸಮ್ಮತಿಯಿಲ್ಲದೆ ಕಂಪನಿ ನಿರ್ದೇಶಕರು ದೇಶ ಬಿಟ್ಟು ಹೋಗಬಾರದು. ಅಲ್ಲದೆ, ತನ್ನ ಅನುಮತಿ ಇಲ್ಲದೇ ನಿರ್ದೇಶಕರ ಪಾಸ್‌ಪೋರ್ಟ್‌ಗಳನ್ನು ಹಿಂದಿರುಗಿಸಬಾರದು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಮತ್ತು ನ್ಯಾಯಮೂರ್ತಿ ಲಲಿತಾ ಕನ್ನೆಗಂಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿತು.

ದುರಂತದಲ್ಲಿ ನೊಂದವರಿಗೆ ನ್ಯಾಯ ಒದಗಿಸಬೇಕು ಹಾಗೂ ಘಟಕವನ್ನು ಸ್ಥಳಾಂತರಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮಜರುಗಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರಕರಣದ ವಿಚಾರಣೆಯನ್ನು ಮೇ 28ಕ್ಕೆ ಮುಂದೂಡಿರುವ ಪೀಠ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮೇ 26ರೊಳಗೆ ತಮ್ಮ ಪ್ರತಿಕ್ರಿಯೆಗಳನ್ನು ದಾಖಲಿಸಬೇಕು ಎಂದೂ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT