ಐಸಿಎಸ್ಸಿಯು ರಾಜ್ಯದಲ್ಲಿ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಜುಲೈ 2ರಿಂದ 12ರವರೆಗೆ ನಡೆಸಲು ನಿರ್ಧರಿಸಿದೆ. ಆದರೆ ಪರೀಕ್ಷೆಗಳನ್ನು ನಡೆಸುವ ಮಂಡಳಿಯ ನಿರ್ಧಾರ ಪ್ರಶ್ನಿಸಿ ಮುಂಬೈ ನಿವಾಸಿ ಅರವಿಂದ ತಿವಾರಿ ಎಂಬುವರು ಕೋರ್ಟ್ ಮೊರೆ ಹೋಗಿದ್ದರು. ಮುಂಬೈನಲ್ಲಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ವಿದ್ಯಾರ್ಥಿಗಳ ಹಿಂದಿನ ಪರೀಕ್ಷಾ ಫಲಿತಾಂಶ ಆಧರಿಸಿ ತೇರ್ಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.