‘ಅಪರಾಧಿ ನರೇಶ್ ಶೇರಾವತ್, ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜತೆಗೆ, ಕೊರೊನಾ ಸೋಂಕು ಸಹ ಬಹುಬೇಗ ತಗುಲಬಹುದು ಎನ್ನುವ ದೃಷ್ಟಿಯಿಂದ 12 ವಾರಗಳ ಕಾಲ ಶಿಕ್ಷೆಯನ್ನು ಅಮಾನತು ಮಾಡಲಾಗಿದೆ. ವೈಯಕ್ತಿಕ ಬಾಂಡ್ ಹಾಗೂ ₹20,000 ಶ್ಯೂರಿಟಿ ಬಾಂಡ್ ಅನ್ನು ನ್ಯಾಯಾಲಕ್ಕೆ ಸಲ್ಲಿಸಬೇಕು’ ಎಂದು ನ್ಯಾಯಮೂರ್ತಿ ಮನಮೋಹನ್ ಮತ್ತು ಸಂಜೀವ್ ನರುಲಾ ಅವರನ್ನು ಒಳಗೊಂಡ ಪೀಠ ಆದೇಶಿಸಿದೆ. ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯಿತು.