ಆಯುಷ್ಮಾನ್ ಭಾರತ್ ಯೋಜನೆ, ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಆದ್ಯತೆ
ಆರೋಗ್ಯ ಕ್ಷೇತ್ರಕ್ಕೆ ₹ 62,659 ಕೋಟಿ

ನವದೆಹಲಿ: ಆರೋಗ್ಯ ಕ್ಷೇತ್ರಕ್ಕೆ ಹಿಂದಿನ ಎರಡು ವರ್ಷಗಳಿಗಿಂತ ಹೆಚ್ಚಿನ ಆದ್ಯತೆ ದೊರೆತಿದ್ದು, 2019–20ನೇ ಹಣಕಾಸು ವರ್ಷದಲ್ಲಿ ₹ 62,659.12 ಕೋಟಿ ನಿಗದಿಪಡಿಸಲಾಗಿದೆ.
ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿರುವ ಆಯುಷ್ಮಾನ್ ಭಾರತ್ –ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗೆ ಈ ಸಾಲಿನಲ್ಲಿ ಗರಿಷ್ಠ ಅಂದರೆ ₹ 6,400 ಕೋಟಿ ನಿಗದಿಪಡಿಸಲಾಗಿದೆ.
ಫಲಾನುಭವಿ ಕುಟುಂಬಗಳಿಗೆ ವಾರ್ಷಿಕ ₹ 5 ಲಕ್ಷದವರೆಗೂ ಆರೋಗ್ಯ ಭದ್ರತೆಯನ್ನು ಒದಗಿಸುವುದು ಈ ಯೋಜನೆಯ ಉದ್ದೇಶ. ಸುಮಾರು 50 ಕೋಟಿ ಜನರಿಗೆ ಯೋಜನೆಯಿಂದ ಲಾಭವಾಗಲಿದೆ ಎಂಬುದು ಕೇಂದ್ರ ಸರ್ಕಾರದ ಅಂದಾಜು.
ರಾಷ್ಟ್ರೀಯ ನಗರ ಆರೋಗ್ಯ ಮಿಷನ್ ಅನ್ವಯ ಆಯುಷ್ಮಾನ್ ಭಾರತ್ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ₹ 249.96 ಕೋಟಿ ಕಾದಿರಿಸಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.