ನವದೆಹಲಿ: ರಾಷ್ಟ್ರ ರಾಜಧಾನಿಯ ತುಘಲಕ್ಬಾದ್ ಕೊಳೆಗೇರಿಯಲ್ಲಿ ಮಂಗಳವಾರ ಬೆಳಿಗ್ಗೆ 1 ಗಂಟೆ ಸುಮಾರಿಗೆ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.
ಸುಮಾರು 30 ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ದೆಹಲಿಯ ದಕ್ಷಿಣ ವಲಯದ ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಎಸ್.ಎಸ್. ತುಲಿ ತಿಳಿಸಿದ್ದಾರೆ.
#UPDATE Around 30 fire tenders are at the spot, the fire has been brought under control. Cause of fire yet to be ascertained. No casualty reported: SS Tuli, Deputy Chief Fire Officer of South Delhi Zone https://t.co/AERZlRBBvGpic.twitter.com/gFDRuI4D7K
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, 'ಸುಮಾರು 30 ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣಗಳು ತಿಳಿದುಬಂದಿಲ್ಲ. ಬೆಂಕಿಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ' ಎಂದು ಹೇಳಿದ್ದಾರೆ.
ಅವಘಡದಲ್ಲಿ ಹಾನಿಗೊಳಗಾದ ಆಸ್ತಿಯ ಮೌಲ್ಯವನ್ನು ಇನ್ನೂ ಅಂದಾಜಿಸಲಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.