ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವದೆಹಲಿಯ ತುಘಲಕ್‌ಬಾದ್ ಕೊಳೆಗೇರಿಯಲ್ಲಿ ಭಾರೀ ಅಗ್ನಿ ಅನಾಹುತ

Last Updated 26 ಮೇ 2020, 1:36 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿಯ ತುಘಲಕ್‌ಬಾದ್ ಕೊಳೆಗೇರಿಯಲ್ಲಿ ಮಂಗಳವಾರ ಬೆಳಿಗ್ಗೆ 1 ಗಂಟೆ ಸುಮಾರಿಗೆ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.

ಸುಮಾರು 30 ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ದೆಹಲಿಯ ದಕ್ಷಿಣ ವಲಯದ ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಎಸ್.ಎಸ್. ತುಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, 'ಸುಮಾರು 30 ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣಗಳು ತಿಳಿದುಬಂದಿಲ್ಲ. ಬೆಂಕಿಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ' ಎಂದು ಹೇಳಿದ್ದಾರೆ.

ಅವಘಡದಲ್ಲಿ ಹಾನಿಗೊಳಗಾದ ಆಸ್ತಿಯ ಮೌಲ್ಯವನ್ನು ಇನ್ನೂ ಅಂದಾಜಿಸಲಾಗಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT