ಲಖನೌ: ಉತ್ತರ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆವರೆಗೆ ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿತ ಅವಘಡಗಳಿಂದ 44 ಜನರು ಸತ್ತಿದ್ದಾರೆ. ಶುಕ್ರವಾರವೂ ವಿವಿಧೆಡೆ ಭಾರಿ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ.
ಲಖನೌ, ಅಮೇಠಿ, ಹರ್ದೊಯಿ ಸೇರಿ ವಿವಿಧೆಡೆ ಶಾಲೆಗಳಿಗೆ ರಜೆ ನೀಡಲಾಗಿದೆ. ಗೋಡೆ ಕುಸಿತ, ನೀರಿನಲ್ಲಿ ಮುಳುಗಿರುವುದು, ಸಿಡಿಲಿನಿಂದ ಸಾವು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.