ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ: ಭಾರಿ ಮಳೆಗೆ 22 ಸಾವು

ಉಕ್ಕಿ ಹರಿಯುತ್ತಿರುವ ಬಿಯಾಸ್‌ ನದಿ * ಭೂಕುಸಿತ, ಸಂಚಾರ ಅಸ್ತವ್ಯಸ್ತ
Last Updated 18 ಆಗಸ್ಟ್ 2019, 20:13 IST
ಅಕ್ಷರ ಗಾತ್ರ

ಶಿಮ್ಲಾ: ಭಾರಿ ಮಳೆ ಮತ್ತು ಭೂಕುಸಿತಕ್ಕೆ ಹಿಮಾಚಲ ಪ್ರದೇಶದಲ್ಲಿ 22 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಭಾನುವಾರ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.‌

ಶಿಮ್ಲಾದ ಆರ್‌ಟಿಒ ಕಚೇರಿ ಎದುರು ಉಂಟಾದ ಭೂಕುಸಿತಕ್ಕೆ ಸಿಲುಕಿ 3 ಮಂದಿ ಸಾವನ್ನಪ್ಪಿದರೆ, ನಾರ್ಕಂಡ್‌ ಪ್ರದೇಶದಲ್ಲಿ ಮರ ಉರುಳಿ ಬಿದ್ದ ಪರಿಣಾಮ ಇಬ್ಬರು ನೇಪಾಳಿ ಪ್ರಜೆಗಳು ಮೃತಪಟ್ಟಿದ್ದಾರೆ. ಮನೆ ಕುಸಿತಕ್ಕೆ ಕಾರ್ಮಿಕ ಬಲಿಯಾಗಿದ್ದು, ಬಿಹಾರದ ಕೃಷ್ಣಗಂಜ್‌ ಜಿಲ್ಲೆಯ ಶಾ ಆಲಂ ಎಂದು ಗುರುತಿಸಲಾಗಿದೆ. ಚಂಬಾ ಜಿಲ್ಲೆಯಲ್ಲಿ ಮನೆ ಗೋಡೆ ಕುಸಿತಕ್ಕೆ ಇಬ್ಬರು ಮೃತಪಟ್ಟಿದ್ದಾರೆ.

ಕುಲು ಜಿಲ್ಲೆಯಲ್ಲಿ ಬಿಯಾಸ್‌ ನದಿ ಉಕ್ಕಿ ಹರಿಯುತ್ತಿದ್ದು, ಸೇತುವೆಯೊಂದು ಕುಸಿದಿದೆ.ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಹಲವು ರಸ್ತೆಗಳುಬಿರುಕು ಬಿಟ್ಟಿವೆ. ಕುಲು–ಮನಾಲಿ ನಗರಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಉಂಟಾಗಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ವಿದ್ಯುತ್‌ ಕಂಬಗಳು ಮತ್ತು ಮರಗಳು ಉರುಳಿವೆ. ರಸ್ತೆ ಬದಿ ನಿಂತಿದ್ದ ವಾಹನಗಳು ಭೂಕುಸಿತಕ್ಕೆ ಕಣಿವೆಗೆ ಜಾರಿವೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ತೊಡಗಿದ್ದಾರೆ.

ಶಾಲಾ ಕಾಲೇಜುಗಳಿಗೆ ರಜೆ: ಸೋಮವಾರವೂ ಭಾರಿ ಮಳೆ ಸುರಿಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕುಲು, ಚಂಬಾ ಮತ್ತು ಶಿಮ್ಲಾ ಜಿಲ್ಲೆಗಳ ಶಾಲಾ– ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರಾಖಂಡದಲ್ಲಿ ಮೇಘಸ್ಫೋಟ
ಡೆಹ್ರಾಡೂನ್‌(ಪಿಟಿಐ):
ಉತ್ತರಾಖಂಡದ ವಿವಿಧೆಡೆ ಭಾನುವಾರ ಸುರಿದ ಭಾರಿ ಮಳೆ ಹಾಗೂ ಮೇಘಸ್ಫೋಟಕ್ಕೆ ಕನಿಷ್ಠ 8 ಮಂದಿ ನಾಪತ್ತೆಯಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ಉತ್ತರಕಾಶಿ ಜಿಲ್ಲೆಯ ಮೋರಿ ಬ್ಲಾಕ್‌ನಲ್ಲಿ ಮೇಘಸ್ಫೋಟ ಸಂಭವಿಸಿ ಅರಕೋಟ್‌, ಮಾಕುರಿ ಮತ್ತು ಟಿಕೋಚಿ ಗ್ರಾಮಗಳಲ್ಲಿ ಮನೆಗಳು ಹಾನಿಗೀಡಾಗಿವೆ.

ಮಳೆ ತೀವ್ರವಾಗಿರುವ ಕಾರಣ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲು ತೊಂದರೆಯಾಗುತ್ತಿದೆ ಎಂದು ಹೇಳಿದ್ದಾರೆ.

ಭೂಕುಸಿತದಿಂದಾಗಿ ಚಾರ್‌ಧಾಮ್‌ ಯಾತ್ರೆಗೆ ತೆರಳುವ ಮಾರ್ಗದಲ್ಲೂ ಸಂಚಾರಕ್ಕೆ ತಡೆಯುಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT